Advertisement

Kollegala: ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಇಬ್ಬರ ಬಂಧನ

01:21 PM Oct 22, 2024 | Team Udayavani |

ಕೊಳ್ಳೇಗಾಲ: ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್ ) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ನಗರ ಪೊಲೀಸ್ ಠಾಣೆಯ ಪಿ. ಎಸ್.ಐ. ವರ್ಷ ಮತ್ತು ತಂಡ ಅ.22ರ ಮಂಗಳವಾರ ನಗರದ ಹೊಸ ಅಣಗಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಧಿಸಿದ್ದಾರೆ.

Advertisement

ಮೈಸೂರು ಆಶೋಕಪುರಂ ನಿವಾಸಿ ವಸಂತ ಕುಮಾರ್ (50), ರಾಮನಗರ ಜಿಲ್ಲೆಯ ಕನಕಪುರ ನಿವಾಸಿ ವೈರ ಮುಡಿ(40) ಎಂಬವರನ್ನು ಬಂಧಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತ., ಡಿ.ವೈ.ಎಸ್.ಪಿ. ಧರ್ಮೇಂದ್ರ, ಸಿಐ ಶಿವಮಾದಯ್ಯ ಅವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಗರದ ಹೊಸ ಅಣಗಳ್ಳಿ ಬಳಿ ಬರುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿದ್ದ 4 ಕೆ. ಜಿ. 386 ಗ್ರಾಮ್ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next