Advertisement

Kollegala: ಕಾಡು ಕುರಿ ಬೇಟೆಯಾಡಿದವನ ಬಂಧನ; ತಲೆಮರೆಸಿಕೊಂಡಿರುವ ಇನ್ನೋರ್ವ

08:40 PM Oct 19, 2023 | Team Udayavani |

ಕೊಳ್ಳೇಗಾಲ: ಅರಣ್ಯ ಪ್ರದೇಶದಲ್ಲಿ ಕಾಡು ಕುರಿಯನ್ನು ಬೇಟೆಯಾಡಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ಜಾಗೇರಿ ಅರಣ್ಯ ಪ್ರದೇಶದಲ್ಲಿ ಗುರುವಾರ ಬಂಧಿಸಿದ್ದಾರೆ.

Advertisement

ತಾಲೂಕಿನ ಜಾಗೇರಿ ಗ್ರಾಮದ ನಿವಾಸಿ ಧೋಮಿದಿನ್ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಜಪಪಾಕ್ಯಂ ತಲೆಮರೆಸಿ ಕೊಂಡಿದ್ದಾನೆ.
ಬಂಧಿತರಿಂದ ಚರ್ಮ, ಮಚ್ಚು, ಚೂರಿ, ತಲೆ ಬ್ಯಾಟರಿ, ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ..

ಆರೋಪಿಗಳುಜಾಗೇರಿಯ ಅರಣ್ಯ ಪ್ರದೇಶದ ದೊಡ್ಡ ಮಾಕಳಿಯಲ್ಲಿ ಭೇಟೆಯಾಡಿ ಅದರ ಮಾಂಸವನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿಎಫ್ಓ ಸಂತೋಷ್ ಕುಮಾರ್, ಎಸಿಎಫ್ ಶಶಿಧರ್, ಆರ್.ಎಫ್.ಓ ಭರತ್, ಡಿ.ಆರ್.ಎಫ್.ಓ ನಂದೀಶ್ ಹಾಗೂ ಸಿಬಂದಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next