Advertisement

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

07:23 PM Oct 04, 2024 | Team Udayavani |

ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರದ ಮಧ್ಯರಂಗನಾಥಸ್ವಾಮಿ ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿರುವ ಘಟನೆ ಶುಕ್ರವಾರ (ಅ.೦4) ನಡೆದಿದೆ.

Advertisement

ಬೆಂಗಳೂರಿನ ನಾಯಂಡನಹಳ್ಳಿ ನಿವಾಸಿ ಶಿವಸ್ವಾಮಿ ಎನ್ನುವವರ ಮಗನಾದ ಸಂದೀಪ್(26) ಮೃತ ದುರ್ದೈವಿಯಾಗಿದ್ದಾನೆ.

ಈತ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ತನ್ನ ಮನೆಯಿಂದ ಸ್ನೇಹಿತರ ಮನೆಗೆ ಹೋಗುವುದಾಗಿ ಹೇಳಿ ಹೋದ ಯುವಕ ಶಿವನಸಮುದ್ರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ವಿಚಾರ ತಿಳಿದ ಮೃತನ ತಂದೆ ಶಿವಸ್ವಾಮಿ ಮತ್ತು ಪೋಷಕರು ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ತಂದೆ ತಾಯಿ ಜಗಳದಿಂದ ಬೇಸತ್ತು ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿ. ಎಸ್ ಐ .ಸುಪ್ರಿತ್ ಪ್ರಕರಣ ದಾಖಲಿಸಿಕೊಂಡು ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next