Advertisement

ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಆನೆಯ ಮೃತದೇಹ ಪತ್ತೆ: ಅಧಿಕಾರಿಗಳಿಂದ ಪರಿಶೀಲನೆ

08:14 PM May 20, 2023 | Team Udayavani |

ಕೊಳ್ಳೇಗಾಲ: ಬೆಟ್ಟದ ತಪ್ಪಲಿನಲ್ಲಿರುವ ಜಮೀನೊಂದರಲ್ಲಿ ಗಂಡಾನೆಯೊಂದು ಶನಿವಾರ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆಯೊಂದು ತಾಲ್ಲೂಕಿನ ಜಾಗೇರಿ ಸಮೀಪದ ಆರ್. ಬಿ. ತಾಂಡದಲ್ಲಿ ಸಂಭವಿಸಿದೆ.

Advertisement

ಗ್ರಾಮದ ಗೋವಿಂದ ನಾಯ್ಕ ಎಂಬವರಿಗೆ ಸೇರಿದ ಜಮೀನಿನಲ್ಲಿ ಸುಮಾರು 20 ವರ್ಷದ ಗಂಡಾನೆ ಅನುಮಾನಸ್ಪದವಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ.

ರೈತರು ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದಾಗ ಆನೆಯ ಮೃತದೇಹ ಪತ್ತೆಯಾಗಿದೆ, ಇದನ್ನು ಕಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆರ್ ಆಫ್ ಓ. ಭರತ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dandeli: ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್… ಸಾರಿಗೆ ಘಟಕದ ನಿರ್ಲಕ್ಷ್ಯಕ್ಕೆ ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next