Advertisement

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

08:41 PM Jun 28, 2024 | Team Udayavani |

ಕೊಳ್ಳೇಗಾಲ: ಬೈಕ್ ನಲ್ಲಿ ಹೋಗುತ್ತಿದ್ದ ಸವಾರನಿಗೆ ನವಿಲು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಮತ್ತು ನವಿಲು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂತೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

Advertisement

ಸೂರಪೂರ ಗ್ರಾಮದ ನಿವಾಸಿ ರಾಜೂಗೌಡ ರವರ ಮಗನಾದ ರೇವಣ್ಣ(25) ಎಂಬಾತ ಮೃತ ದುರ್ದೈವಿ.ಬೆಂಗಳೂರಿನಲ್ಲಿ ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ರೇವಣ್ಣ ಗ್ರಾಮದಿಂದ ಕುಂತೂರು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗುತ್ತಿದ್ದ ವೇಳೆ ಬೈಕ್ ಗೆ ಅಡ್ಡಲಾಗಿ ನವಿಲು ನುಗ್ಗಿದೆ. ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದು ಸ್ಥಳದಲ್ಲೇಸಾವನ್ನಪ್ಪಿದ್ದಾನೆ. ನವಿಲು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next