Advertisement

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

09:28 PM May 05, 2023 | Team Udayavani |

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 5ರಂದು ಸಹಸ್ರ ಕಲಶಗಳೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು.

Advertisement

ಬೆಳಗ್ಗೆ ಯಾಗೇಶ್ವರಿ ಹೋಮ, ಸಹಸ್ರಕಲಶಗಳೊಂದಿಗೆ ಬ್ರಹ್ಮ ಕಲಶಾಭಿಷೇಕ ಮಹಾಪೂಜೆ, ಧ್ವಜಪೂಜೆ, ಕ್ಷೇತ್ರಪಾಲ ಪೂಜೆ, ಚತುರ್ವೇದ ಪಾರಾಯಣ ಸಹಿತ ಭೇರಿತಾಡನ, ಪಳಹ ಪೂಜೆ, ವಿಶೇಷ ಬಲಿ, ಪಲ್ಲಕ್ಕಿ ಉತ್ಸವ, ಮಯೂರ ಆರೋಹಣೋತ್ಸವ, ಡೋಲಾ ರೋಹಣೋತ್ಸವ, ತಂತ್ರಿ ನಿತ್ಯಾ ನಂದ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು.

ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಕಾರ್ಯನಿರ್ವಹಣಾ ಕಾರಿ ಎಸ್‌.ಸಿ. ಕೋಟಾರಗಸ್ತಿ, ಸದಸ್ಯರಾದ ಡಾ| ರಾಮಚಂದ್ರ ಅಡಿಗ, ಡಾ| ಅತುಲ್‌ ಕುಮಾರ್‌ ಶೆಟ್ಟಿ, ಗಣೇಶ ಕಿಣಿಬೆಳ್ವೆ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ಸಂಧ್ಯಾ ರಮೇಶ, ರತ್ನ ಆರ್‌.ಕುಂದರ್‌, ಅರ್ಚಕರಾದ ಡಾ| ನಿತ್ಯಾನಂದ ಅಡಿಗ, ಡಾ| ಕೆ.ಎನ್‌. ನರಸಿಂಹ ಅಡಿಗ, ಗೋವಿಂದ ಅಡಿಗ, ಶ್ರೀಧರ ಅಡಿಗ, ಸುಬ್ರಹ್ಮಣ್ಯ ಅಡಿಗ, ಕೇರಳ ವಿಧಾನಸಭೆಯ ವಿಪಕ್ಷ ನಾಯಕ ವಿ.ಡಿ. ಸತೀಶ, ಕೊಲ್ಲೂರು ಗ್ರಾ. ಪಂ.ಅಧ್ಯಕ್ಷ ಶಿವರಾಮಕೃಷ್ಣ ಭಟ್‌ ಮತ್ತಿತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next