Advertisement

ಸಲಾಂ ಮಂಗಳಾರತಿ ಕುರಿತು ಕೊಲ್ಲೂರು‌ ದೇಗುಲ‌ ಆಡಳಿತ ಮಂಡಳಿ ಸ್ಪಷ್ಟನೆ

06:32 PM Mar 29, 2022 | Team Udayavani |

ಉಡುಪಿ : ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದ ಆಡಳಿತ ಮಂಡಳಿ ಮಂಗಳವಾರ ಸ್ಪಷ್ಟನೆ ನೀಡಿದೆ.

Advertisement

”ದೇಗುಲದಲ್ಲಿ‌ಸಂಪ್ರದಾಯದಂತೆ ಪೂಜೆ ನಡೆಯುತ್ತವೆ, ಸಂಜೆ ಪ್ರದೋಷ ಪೂಜೆಯನ್ನ ನೆರವೇರಿಸಲಾಗುತ್ತದೆ. ಇದನ್ನ ಸ್ಥಳೀಯರು ಸಲಾಂ ಮಂಗಳಾರತಿ ಎನ್ನುತ್ತಾರೆ. ಆದರೆ ದೇಗುಲದಿಂದ ಯಾವುದೇ ಬೇರೆ ಆರತಿ ‌ನಡೆಯುವುದಿಲ್ಲ. ವ್ಯಕ್ತಿಪೂಜೆಯನ್ನೂ‌ಮಾಡಲಾಗುತ್ತಿಲ್ಲ” ಎಂದು ದೇಗುಲದ ಆಡಳಿತ ಸ್ಪಷ್ಟನೆ ನೀಡಿದೆ.

ದೇವಸ್ಥಾನದಲ್ಲಿ ಪ್ರತೀದಿನ ರಾತ್ರಿ 8 ಗಂಟೆಗೆ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತ್ತು. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ. ಭಾರತದ 108 ಶಕ್ತಿ ಪೀಠಗಳಲ್ಲಿ ಕೊಲ್ಲೂರು ಕೂಡಾ ಒಂದು. ಇಂತಹ ಕ್ಷೇತ್ರದಲ್ಲಿ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ನೂರಾರು ದೇವಸ್ಥಾನಗಳನ್ನು ಧ್ವಂಸ ಮಾಡಿದ ಟಿಪ್ಪು ಸುಲ್ತಾನನ ಹೆಸರಿನಲ್ಲಿ ಮೂಕಾಂಬಿಕೆಗೆ ಮಹಾ ಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತದ್ದು. ಇದು ಗುಲಾಮಗಿರಿಯ ಸಂಕೇತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ ಮಾಡುತ್ತದೆ ಎಂದು ವಿಎಚ್ ಪಿ ಹೇಳಿತ್ತು. ಆಡಳಿತ ಮಂಡಳಿಗೆ ಪತ್ರ ಬರೆದು ಸಲಾಂ ಮಂಗಳಾರತಿ ಕೈಬಿಡುವಂತೆ ಒತ್ತಾಯಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next