Advertisement

ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನ ಸಮಿತಿ: ಅಧ್ಯಕ್ಷರ ಮುಂದುವರಿಕೆಗೆ ಆದೇಶ

10:18 PM Dec 16, 2021 | Team Udayavani |

ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಹಾಗೂ ಸದಸ್ಯ ಸ್ಥಾನದಲ್ಲಿ ಗಣೇಶ್‌ ಕಿಣಿ ಮುಂದುವರಿಯಬಹುದು ಎಂದು ಹೈಕೋರ್ಟ್‌ ಆದೇಶಿಸಿದೆ.

Advertisement

ಇವರಿಬ್ಬರು ಸಮಿತಿಯ ಸಭೆ ಹಾಗೂ ದೈನಂದಿನ ಚಟುವಟಿಕೆ ಗಳನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರ ಗಳಿಗೆ ಮತದಾನ ಮಾಡುವಂತಿಲ್ಲ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರನ್ನಾಗಿ ಮತ್ತು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದನ್ನು ಅಸಿಂಧುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಚಂದ್ರಶೇಖರ್‌ ಶೆಟ್ಟಿ ಹಾಗೂ ಗಣೇಶ್‌ ಕಿಣಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಗುರುವಾರ ತಡೆಯಾಜ್ಞೆ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next