Advertisement

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸಾವು

01:00 PM Aug 06, 2022 | Team Udayavani |

 

Advertisement

ಉಳ್ಳಾಲ : ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಪುತ್ತೂರು ತಾಕೂಕಿನ ಸವಣೂರು ನಿವಾಸಿ ಜಗನ್ನಾಥ(44) ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದರು.

ಮೃತರುಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಳೆದ 22 ವರ್ಷಗಳಿಂದ ಪೊಲೀಸ್ ಸೇವೆಯಲ್ಲಿದ್ದ ಜಗನ್ನಾಥ್ ಕೊಣಾಜೆ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎಸ್. ಬಿ.ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇಂದು ಬೆಳಗ್ಗೆ ಕರ್ತವ್ಯ ನಿರತರಾಗಿದ್ದ ವೇಳೆ ಅಸ್ವಸ್ಥರಾದ ಅ ರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತದೇಹವನ್ನು ಇಂದು ಮಧ್ಯಾಹ್ನ ಕೊಣಾಜೆ ಪೊಲೀಸ್ ಠಾಣೆ ಬಳಿಕ ಕಮಿಷನರ್ ಕಚೇರಿಯಲ್ಲಿ ಅಂತಿಮ ದರ್ಶನದ ಬಳಿಕ ಅವರ ಹುಟ್ಟೂರು ಸವಣೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next