Advertisement

ತೀರ್ಥಹಳ್ಳಿ: ಗ್ರಾಮ ಪಂಚಾಯತಿಯಲ್ಲೇ ಸದಸ್ಯರ ಮಾರಾಮಾರಿ! ಆಸ್ಪತ್ರೆ ದಾಖಲು

06:29 PM Jan 13, 2022 | Team Udayavani |

ತೀರ್ಥಹಳ್ಳಿ: ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ.

Advertisement

ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

ಇದನ್ನೂ ಓದಿ : ತೀರ್ಥಹಳ್ಳಿ: ಉದ್ಯಮದಲ್ಲಿ ನಷ್ಟ ಅನುಭವಿಸಿ ನೇಣಿಗೆ ಶರಣಾದ ದಂಪತಿ

Advertisement

Udayavani is now on Telegram. Click here to join our channel and stay updated with the latest news.

Next