Advertisement

ಸ್ವಯಂಪ್ರೇರಿತ ಲಾಕ್‌ಡೌನ್‌

04:25 PM Jul 05, 2020 | Naveen |

ಕೊಂಡ್ಲಹಳ್ಳಿ: ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಶನಿವಾರ ಗ್ರಾಮಸ್ಥರು ಸ್ವಯಂಪ್ರೇರಿತ ಲಾಕ್‌ಡೌನ್‌ ಮಾಡಿದರು.

Advertisement

ಮೊಳಕಾಲ್ಮೂರು ತಾಲೂಕಿನಲ್ಲಿ ಸೋಂಕಿನ ವರದಿ ಹಾಗೂ ನೆರೆಯ ಆಂಧ್ರಪ್ರದೇಶದ ರಾಯದುರ್ಗದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೋಂಕಿನಿಂದಾಗಿ ಕೊಂಡ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರಲ್ಲಿ ಆತಂಕ ಉಂಟಾಗಿದೆ. ಸೋಂಕು ತಡೆಗೆ ಕೊಂಡ್ಲಹಳ್ಳಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಲಾಕ್‌ಡೌನ್‌ಗೆ ಮುಂದಾದರು.

ಶನಿವಾರ ಮಧ್ಯಾಹ್ನದಿಂದ ಎಲ್ಲಾ ಅಂಗಡಿ, ಹೋಟೆಲ್‌ ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಜನ ಸಂಚಾರವಿಲ್ಲದೆ ಮುಖ್ಯ ರಸ್ತೆಗಳು ಬಿಕೋ ಎನ್ನುತ್ತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next