Advertisement

ಕೇಂದ್ರ ಸಚಿವ ಜೋಶಿ ಬಳಿಗೆ ಕೊಂಕಣಿ ಅಕಾಡೆಮಿ ನಿಯೋಗ

02:16 AM Oct 04, 2021 | Team Udayavani |

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯಲಿರುವ ಹೊರನಾಡ ಕಾರ್ಯಕ್ರಮವನ್ನು ಹೊಸದಿಲ್ಲಿಯಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಮತ್ತು ಕಲ್ಲಿದ್ದಲು ಖಾತೆಗಳ ಸಚಿವ ಪ್ರಹ್ಲಾದ ಜೋಶಿ ಅವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನಿಯೋಗದೊಂದಿಗೆ ಹುಬ್ಬಳ್ಳಿಯ ಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಲಾಯಿತು.

Advertisement

ಹೊಸದಿಲ್ಲಿಯಲ್ಲಿ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಇತರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಇದೇ ವೇಳೆ ಚರ್ಚಿಸಲಾಯಿತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ| ಜಗದೀಶ್‌ ಪೈ, ಸದಸ್ಯ ಪ್ರಮೋದ ಶೇಟ್‌, ಸುರೇಂದ್ರ ಪಾನಲಕರ್‌ ಹಾಗೂ ಅರುಣ್‌ ಜಿ. ಶೇಟ್‌ ನಿಯೋಗದಲ್ಲಿದ್ದರು.

ಇದನ್ನೂ ಓದಿ:ರಾಷ್ಟ್ರಪತಿಗಳ ವಾಸ್ತವ್ಯಕ್ಕೆ ಸರ್ಕೀಟ್ ಹೌಸ್ ಸಜ್ಜು

 

Advertisement

Udayavani is now on Telegram. Click here to join our channel and stay updated with the latest news.

Next