Advertisement

ಡಿಕೆಶಿ ಪದಗ್ರಹಣ; ಕೋಟ 16 ಗ್ರಾ.ಪಂ. ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕಾರ

01:35 PM Jul 02, 2020 | sudhir |

ಕೋಟ: ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದ ಪ್ರದಾನ ಸಲುವಾಗಿ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 16 ಗ್ರಾ.ಪಂ. ಕೇಂದ್ರಗಳಲ್ಲಿ ಏಕ ಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.  ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು.

Advertisement

ಜೂಮ್ ಆ್ಯಪ್ ಮೂಲಕ ನೇರ ಸಂಪರ್ಕ ಮೂಲಕ ಉತ್ಸಾಹದಲ್ಲಿ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದರು. ಇದೇ ಸಂದರ್ಭ ಪದಪ್ರದಾನದ ಸವಿನೆನಪಿಗಾಗಿ ಕಿಶನ್ ಹೆಗ್ಡೆಯವರಿಂದ ನಿರಂತರ ಮೂರು ತಿಂಗಳ ಕಾಲ ಸಹಸ್ರ ವೃಕ್ಷ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next