Advertisement

Koppa; 750 ರೂ. ಸಾಲ ತೀರಿಸಲಾಗದೆ ಪ್ರಾಣ ಕಳೆದುಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ

02:47 PM Aug 28, 2023 | Team Udayavani |

ಚಿಕ್ಕಮಗಳೂರು:ಇತ್ತೀಚಿಗೆ ಕೊಪ್ಪ ತಾಲೂಕಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರೀನಿವಾಸ್ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ 9ನೇ ತರಗತಿ ವಿದ್ಯಾರ್ಥಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ವೇಳೆ ಕೇವಲ 750 ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದಿದ್ದುದಕ್ಕೆ ಕಠಿಣ ನಿರ್ಧಾರ ತಳೆದಿದ್ದಾನೆ ಎಂದು ಹೇಳಿದ್ದಾರೆ.

Advertisement

ಕಡೂರು ತಾಲೂಕಿನ ಹಿರೇ ಬಳ್ಳಕೆರೆ ಗ್ರಾಮದ ಶ್ರೀನಿವಾಸ್ ಕೊಪ್ಪ ತಾಲೂಕಿನ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.ಆತ್ಮಹತ್ಯೆಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆ ಗೂ ಮುಂಚೆ ಬರೆದಿಟ್ಟಿದ್ದ ಡೆತ್ ನೋಟ್ ಪರಿಶೀಲಿಸಿದಾಗ, ವಿದ್ಯಾರ್ಥಿ ಸ್ನೇಹಿತರಿಂದ ಪಡೆದಿದ್ದ 750 ರೂ. ಸಾಲವನ್ನು ನೀಡಲು ಸಾಧ್ಯವಾಗದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಶ್ರೀನಿವಾಸ್ ಮಾಜಿ ಯೋಧನ ಮಗನಾಗಿದ್ದು, ಮಗನನ್ನು ಕಳೆದು ಕೊಂಡ ತಂದೆ ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next