Advertisement

ಕೊಪ್ಪಳ: ಅನಿಷ್ಠ ದೇವದಾಸಿ ಪದ್ಧತಿ ತೊಲಗಿಸಿ: ಅರವಿಂದ ಸುತಗುಂಡಿ

06:18 PM May 15, 2023 | Team Udayavani |

ಕೊಪ್ಪಳ: ದೇವರ ಹೆಸರಲ್ಲಿ ಮಕ್ಕಳು ಹಾಗೂ ಮಹಿಳೆಯರನ್ನು ಬಲಿ ತೆಗೆದುಕೊಳ್ಳುವ ಈ ಅನಿಷ್ಟ ದೇವದಾಸಿ ಪದ್ಧತಿಯು
ನಿರ್ಮೂಲನೆಯಾಗಬೇಕು ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಸಿಇಒ ಅರವಿಂದ ಸುತಗುಂಡಿ ಅವರು ಹೇಳಿದರು.

Advertisement

ಸುಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದ ವೇಳೆ ಮಕ್ಕಳ ಮತ್ತು  ಮಹಿಳೆಯರ ಸುರಕ್ಷತಾ ಜಾಗೃತಿ ಮತ್ತು
ಸಮಾಜದ ಅನಿಷ್ಠ ದೇವದಾಸಿ ಪದ್ಧತಿ ಕುರಿತು ಶನಿವಾರದಿಂದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇವರ ಹೆಸರಿನಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಬಲಿ ತೆಗೆದುಕೊಳ್ಳುವ ದೇವದಾಸಿ ಪದ್ಧತಿಯಂತ ಅಂಧ ಆಚರಣೆಗಳು ಮಕ್ಕಳ ಮತ್ತು ಮಹಿಳೆಯರ ಮೇಲೆ ದುಷ್ಟರಿಣಾಮವನ್ನುಂಟು ಮಾಡುತ್ತದೆ. ಬಾಲ್ಯವಿವಾಹ ಪದ್ಧತಿ ನಿಲ್ಲಬೇಕು. ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ತಿಳಿಸಿದರು.

ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಯೋಳಬಾವಿ ಮಾತನಾಡಿ, ಅನೇಕ ಶತ ಶತಮಾನಗಳಿಂದಲೂ ಅನಕ್ಷರತೆ, ಮೂಢನಂಬಿಕೆ, ಪರಸ್ಪರ ಶೋಷಣೆ, ದೌರ್ಜನ್ಯಗಳಿಂದ ಬಳಲಿದ ಸಮಾಜವು 21ನೇ ಶತಮಾನದಲ್ಲಿಯಾದರೂ ಶಾಂತಿ ನೆಮ್ಮದಿ ಪರಸ್ಪರ ಸೌಹಾರ್ದತೆಯಿಂದ ಇರಬೇಕಿದೆ.

ಈ ನಿಟ್ಟಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ಶೋಷಣೆ ದೌರ್ಜನ್ಯಗಳನ್ನು ತಡೆಗಟ್ಟಲು ಸಾಮಾಜಿಕ ಜಾಗೃತಿ ಕಹಳೆಯನ್ನು ಮೊಳಗಿಸೋಣ. ದೇವಿಯ ಜಗಹೊತ್ತು ಬರುವ ಜೋಗಮ್ಮ, ಜೋಗಪ್ಪಗಳಿಗೆ ಭಿಕ್ಷೆ ಅಥವಾ ಜೋಗ ನೀಡುವುದನ್ನು ನಿಲ್ಲಿಸಬೇಕು ಹಾಗೂ ಅವರಿಗೆ ಬದುಕಲು ತಿಳಿವಳಿಕೆ ನೀಡಬೇಕೆಂದು ತಿಳಿಸಿದರು.

ಸಖಿ-ಒನ್‌ ಸ್ಟಾಪ್‌ ಸೆಂಟರ್‌ ಆಡಳಿತಾಧಿಕಾರಿ ಯಮುನಾ ಬೇಸ್ತಾರ ಮಾತನಾಡಿ, ಮೈಯಲ್ಲಿ ದೇವರು ಬಂದಂತೆ ಆಡುವವರಿಗೆ, ಮಾನಸಿಕ ಸನ್ನಿ ಬರುವಂತವರಿಗೆ ಮನೋವೈದ್ಯ ತಜ್ಞರಿಂದ ಚಿಕ್ಸಿತೆ ಮಾಡಿಸುವುದು ಅತೀ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಂತಹ ಯಾವುದೇ ರೀತಿಯ ಜನರು ಕಂಡು ಬಂದರೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿರುವ ತುರ್ತು ಚಿಕಿತ್ಸಾ ಘಟಕ-ಉಚಿತ ಸಲಹಾ ಕೇಂದ್ರ ಸಖೀ-ಒನ್‌ ಸ್ಟಾಪ್‌ ಸೆಂಟರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ ಘಟಕಕ್ಕೆ ತಿಳಿಸಬೇಕೆಂದು ಮಾಹಿತಿ ನೀಡಿದರು.

Advertisement

ಜಾಗೃತಿ ಕಾರ್ಯಕ್ರಮದಲ್ಲಿ ಅನಿಷ್ಠ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲು ಆಟೋ ಪ್ರಚಾರ ಮಾಡಲಾಯಿತು. ಮಾಹಿತಿ ಕೇಂದ್ರದ ಮೂಲಕ ಹಾಗೂ ಕರ ಪತ್ರಗಳನ್ನು ವಿತರಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

ಕೊಪ್ಪಳದ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ದಾದೇಸಾಬ್‌ ಎಚ್‌., ಸಕ್ಕುಬಾಯಿ ಎಸ್‌.ಎಚ್‌., ಗಂಗಾವತಿ ತಾಲೂಕಿನ
ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಭೀಮಣ್ಣ ಟಿ.ಜಿ., ಯಲಬುರ್ಗಾ ತಾಲೂಕಿನ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ರೇಣುಕಾ ಎಂ. ಕುಷ್ಟಗಿ, ತಾಲೂಕಿನ ದೇವದಾಸಿ ಪುನರ್ವಸತಿ ಯೋಜನಾ ಧಿಕಾರಿ ಮರಿಯಪ್ಪ ಎಂ. ಮತ್ತು ದೇವದಾಸಿ ಯೋಜನೆಯ ಸ್ವಯಂ ಸೇವಕರು ಹಾಗೂ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಮಲ್ಟಿಪರ್ಪಸ್‌ ವರ್ಕರ್‌ ಸರೋಜಾ ಹಿರೇಮಠ ಅವರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next