Advertisement

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

07:55 PM Sep 17, 2024 | Team Udayavani |

ಕೊಪ್ಪಳ: ಎಸ್‌ಡಿಪಿಐ, ಆರ್‌ಎಸ್‌ಎಸ್‌ ಸೇರಿ ಯಾರೇ ಆಗಲಿ ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಯಾವುದನ್ನೂ ಸಹಿಸುವುದಿಲ್ಲ. ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪ್ರಚೋದನಕಾರಿ ಹೇಳಿಕೆ ನೀಡಿದವರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಶೀಘ್ರದಲ್ಲಿಯೇ ಬಂಧಿಸಿ ಜೈಲಿಗೆ ಕಳಿಸಲಾಗುವುದು. ಪ್ರಚೋದನಕಾರಿ ಭಾಷಣ ಮಾಡುವ, ಹೇಳಿಕೆ ಕೊಡುವ ಯಾರೇ ಇರಲಿ, ಯಾವುದೇ ಪಕ್ಷದವರಿರಲಿ ಕ್ರಮ ಕೈಗೊಳ್ಳಲಾಗುವುದು.

ಸಿಎಂ ರೇಸ್‌ನಲ್ಲಿ ನಾನೂ ಇದ್ದೇನೆ ಎಂದಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಹೇಳಿಕೆ ನಾನು ಗಮನಿಸಿಲ್ಲ. ರಾಯರಡ್ಡಿ ಅವರು ಸೇರಿದಂತೆ ಯಾರೇ ಆಗಲಿ ಸಿಎಂ ರೇಸ್‌ ಬಗ್ಗೆ ಮಾತನಾಡುವುದು ಬೇಡ. ಅವರಿಗೆ ಸಿಎಂ ಖುರ್ಚಿ ಖಾಲಿಯಿಲ್ಲ ಎಂದಷ್ಟೇ ಹೇಳುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next