Advertisement

Koppala; ಮೋದಿ ಪ್ರಧಾನಿಯಾಗಲು ಅಭ್ಯರ್ಥಿ ಪರ ಪ್ರಚಾರ: ಸಂಗಣ್ಣ ಕರಡಿ ಕೋಪ ಶಮನ

04:25 PM Apr 01, 2024 | Team Udayavani |

ಕೊಪ್ಪಳ: ದೇಶಕ್ಕೆ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲು ಕ್ಷೇತ್ರದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವೆ ಎಂದು ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ ಅವರು ಹೇಳಿದರು.

Advertisement

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ನಾಯಕರ ಮೇಲೆ ಭರವಸೆ ಇಟ್ಟುಕೊಂಡು ಪ್ರಚಾರಕ್ಕೆ ಹೋಗುತ್ತಿದ್ದೇನೆ. ಕುಷ್ಟಗಿಯಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗುತ್ತೇನೆ. ನನಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ಮರುಪರಿಶೀಲನೆ ಮಾಡಬೇಕು, ರಾಜ್ಯಸಭಾ ಸದಸ್ಯತ್ವ ನೀಡಬೇಕು. ವಿಧಾನಪರಿಷತ್ ಸದಸ್ಯತ್ವ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದರು. ಈ ನಂತರದಲ್ಲಿ ಎರಡು ಬಾರಿ ಮುಖಂಡರು ಸಭೆ ನಡೆಸಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಬರಲಿದ್ದಾರೆ. ಅವರೊಂದಿಗೆ ಮಾತನಾಡುತ್ತೇನೆ ಎಂದು ವರಿಷ್ಠರು ಹೇಳಿದ್ದಾರೆ. ನನಗೆ ಭರವಸೆ ಇದೆ. ಭರವಸೆಯ ಮೇಲೆ ಜೀವನ ನಡೆಸಬೇಕು ಎಂದರು.

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ನಾನು ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ. ನಾನು ಪ್ರಚಾರ ಮಾಡುವುದನ್ನು ಎದೆಬಗೆದು ತೋರಿಸಲು ಆಗುವುದಿಲ್ಲ. ಈ ಬಾರಿ ಹಲವು ಸಂಸದರಿಗೆ ಟಿಕೆಟ್ ತಪ್ಪಿಸಲಾಗಿದೆ. ಯುವಕರಿಗೆ ಟಿಕೆಟ್ ನೀಡಬೇಕು. ಯುವಕರಿಗೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಹೈಕಮಾಂಡ್ ತೀರ್ಮಾನಿಸಿರಬಹುದು. ನಾನು ಸಂಪೂರ್ಣವಾಗಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ಟಿಕೆಟ್ ವಂಚಿತವಾದ ನಂತರ ಸಹಜವಾಗಿ ಕಾಂಗ್ರೆಸ್ ಪಕ್ಷದವರು ಮಾತನಾಡಿದ್ದಾರೆ. ಆದರೆ ನಾನು ಈಗ ಬಿಜೆಪಿಯಲ್ಲಿಯೇ ಇದ್ದು ಪ್ರಚಾರ ಮಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next