Advertisement

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

02:13 PM May 01, 2024 | Team Udayavani |

ಕೊಪ್ಪಳ: ಚಿಕಿತ್ಸೆ ಫಲಿಸದೇ ಗರ್ಭಿಣಿ ಮೃತಪಟ್ಟ ಘಟನೆ ಜಿಲ್ಲೆಯ ತಾವರಗೇರಾದಲ್ಲಿ ನಡೆದಿದೆ.

Advertisement

ವಿಠಲಾಪುರದ ಲಕ್ಷ್ಮೀ ನೇಮಿನಾಥ್ ಚಿಕಿತ್ಸೆ ಫಲಿಸದೇ ಮೃತಪಟ್ಟ ಗರ್ಭಿಣಿ.

ಗರ್ಭಿಣಿಗೆ ಸರಿಯಾದ ಚಿಕಿತ್ಸೆ ಕೊಟ್ಟಿಲ್ಲ, ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ವೈದ್ಯರ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವರಗೇರಾ ಆಸ್ಪತ್ರೆಯ ವೈದ್ಯರ ವಿರುದ್ಧ ಆಸ್ಪತ್ರೆ ಮುಂದೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ಅಮಾನತು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

Advertisement

ಪ್ರತಿಭಟನೆ ಸ್ಥಳಕ್ಕೆ ಗಂಗಾವತಿ ಡಿಎಸ್ಪಿ ಹಾಗೂ ಕುಷ್ಟಗಿ ಸಿಪಿಐ, ತಹಶೀಲ್ದಾರ್ ಭೇಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next