Advertisement

ಶಿಥಿಲಗೊಂಡ ನೀರಿನ ಟ್ಯಾಂಕ್‌ ತೆರವು; ಉದಯವಾಣಿ ಫಲಶ್ರುತಿ

08:26 AM Oct 29, 2022 | Team Udayavani |

ದೋಟಿಹಾಳ: ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಿಂದೆ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್‌ ಶುಕ್ರವಾರ ಬೆಳಗ್ಗೆ ನೆಲಸಮನ ಮಾಡಲಾಯಿತು.

Advertisement

ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಿಂದೆ ಸುಮಾರ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಈ ನೀರಿನ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿದ್ದು, ಕಳೆದ 7-8 ವರ್ಷಗಳಿಂದ ನೀರಿನ ಟ್ಯಾಂಕ್‌ ಸೋರುತ್ತಿತ್ತು. ಟ್ಯಾಂಕ್‌ನ ಕಂಬಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಅಪಾಯದಲ್ಲಿತ್ತು. ಟ್ಯಾಂಕ್‌ ಪಕ್ಕದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಖಾಸಗಿ ಶಾಲೆಯಿದೆ. ಈ ಎರಡು ಶಾಲೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದು, ಒಂದು ವೇಳೆ ಟ್ಯಾಂಕ್‌ ಕುಸಿದು ಬಿದ್ದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಗಳಿದ್ದವು. ಶಾಲಾ ಮಕ್ಕಳು, ಸುತ್ತಮುತ್ತಲ ಜನರಿಗೆ ಭಯದಿಂದ ಕಾಲ ಕಳೆಯುತ್ತಿದ್ದರು. ಇದರ ಬಗ್ಗೆ ಹಲವು ಬಾರಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸ್ಥಳಾಂತರಿಸಲು ಚರ್ಚೆ ನಡೆದಿತ್ತು. ಸೂಕ್ತ ಕ್ರಮ ಕೈಗೊಳ್ಳಲು ಶಾಸಕರಿಗೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ಉದಯವಾಣಿ ವೆಬ್ ಹಾಗೂ ಪತ್ರಿಕೆಯಲ್ಲಿ ಅಗಸ್ಟ್ 30‌ ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಶಿಥಿಲಗೊಂಡ ನೀರಿನ ಟ್ಯಾಂಕ್‌ ತೆರವುಗೊಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next