Advertisement

Koppala: ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

12:30 PM Aug 19, 2024 | Team Udayavani |

ಕೊಪ್ಪಳ: ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕೊಪ್ಪಳದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ನಾಯಕರ ಹಾಗೂ ರಾಜ್ಯಪಾಲರ ಭಾವಚಿತ್ರ ಸುಟ್ಟು ಆಕ್ರೋಶ ಹೊರಹಾಕಿದರು.

ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯಪಾಲರರು ಆರ್ ಎಸ್ ಎಸ್ ಹೇಳಿದಂತೆ ನಡೆಯುತ್ತಿದ್ದಾರೆ. ಕೇಂದ್ರ ಸರ್ಕಾರ ಹೇಳಿದಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಅವರನ್ನು ವಾಪಾಸ್ ಕರೆಯಿಸಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ವಿರುದ್ದ ಕೊಟ್ಟಿರುವ ಪ್ರಾಶಿಕ್ಯೂಶನ್ ಅನುಮತಿ ರದ್ದು ಪಡಿಸಬೇಕೆಂದು ಆಗ್ರಹಿಸಿದರು.

ಬೃಹತ್ ಪ್ರತಿಭಟನೆ ಮೆರವಣಿಗೆಯಲ್ಲಿ ಸಚಿವ ಶಿವರಾಜ ತಂಗಡಗಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ಸೇರಿ ಇತರರು ಭಾಗಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next