Advertisement

ಎಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

04:26 PM Aug 24, 2019 | Team Udayavani |

ಕೊಪ್ಪಳ: ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃ‌ಷ್ಣನ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಶ್ರೀ ಕೃಷ್ಣ ಜಯಂತಿ ಸರಳವಾಗಿ ಆಚರಿಸಲಾಯಿತು.

Advertisement

ರಾಜ್ಯದಲ್ಲಿ ನೆರೆ ಹಾವಳಿ ಪ್ರಯುಕ್ತ ರಾಜ್ಯಮಟ್ಟದಲ್ಲಿ ಆಚರಿಸಲ್ಪಡುವ ಪ್ರಸಕ್ತ ಸಾಲಿನ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಬಿಡುಗಡೆಯಾದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದರಿಂದ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಅವರು ಸರಳವಾಗಿ ಜಯಂತಿ ಆಚರಿಸಲು ನಿರ್ದೇಶನ ನೀಡಿರುವ ಪ್ರಯುಕ್ತ ಶ್ರೀ ಕೃಷ್ಣ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಸ್ವಾತಂತ್ರ್ಯ ಹೋರಾಟಗಾರ ಸುಮಂತರಾವ್‌ ಪಟವಾರಿ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next