Advertisement

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು : ಮೂವರಿಗೆ ಗಾಯ

01:33 PM Sep 20, 2021 | Team Udayavani |

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರವಿವಾರ ಮಧ್ಯರಾತ್ರಿ ಸಂಭವಿಸಿದೆ.

Advertisement

ಉಡುಪಿಯ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯೊಂದರ ಸಿಬ್ಬಂದಿಗಳು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಉಡುಪಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅಪಘಾತದ ವೇಳೆ ಕಾರಿನಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಧ್ಯರಾತ್ರಿಯಲ್ಲೇ ಸ್ಥಳೀಯರು ಮತ್ತು ಪೊಲೀಸರು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ :ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಸಂಕಲ್ಪ, ತೆಂಗಿನ ಮೌಲ್ಯವರ್ಧನೆಗೆ ಕ್ರಮ : ಶೋಭಾ ಕರಂದ್ಲಾಜೆ

Advertisement

Advertisement

Udayavani is now on Telegram. Click here to join our channel and stay updated with the latest news.

Next