Advertisement

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

01:38 AM Oct 15, 2024 | Team Udayavani |

ಉಳ್ಳಾಲ: ಕುತ್ತಾರು ದೆಕ್ಕಾಡಿನ ಕೊರಗಜ್ಜ ಆದಿಸ್ಥಳಕ್ಕೆ ಬಂದಾಗ ಒಂದು ರೀತಿಯ ನೆಮ್ಮದಿ ಇದೆ. ನಂಬಿಕೆಯ ಕಾರಣದಿಂದ ಈ ಭಾಗಕ್ಕೆ ಬಂದಾಗ ಭೇಟಿ ನೀಡುತ್ತೇನೆ ಎಂದು ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಟ ಡಾ| ಶಿವರಾಜ್‌ ಕುಮಾರ್‌ ಹೇಳಿದರು.

Advertisement

ಆದಿಸ್ಥಳಕ್ಕೆ ಪತ್ನಿ ಸಮೇತ ಭೇಟಿ ನೀಡಿದ ಶಿವರಾಜ್‌ ಕುಮಾರ್‌ ಅವರು ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ ಮಾತನಾಡಿ, ಕರಾವಳಿಯಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದೇ ಒಂದು ಖುಷಿಯ ಸಂಗತಿ. ಶೃಂಗೇರಿ ಮಠ, ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ, ವನದೇವತೆ, ಕೊರಗಜ್ಜನ ಕ್ಷೇತ್ರಕ್ಕೆ ಸಮಯ ಸಿಕ್ಕಾಗಲೆಲ್ಲ ಬರುತ್ತಿದ್ದೇನೆ. ಇಲ್ಲಿಗೆಲ್ಲ ಭೇಟಿ ಕೊಟ್ಟಾಗ ನೆಮ್ಮದಿ ಸಿಗುತ್ತದೆ. ನಂಬಿಕೆಯೂ ಬಲವಾಗಿರುವುದರಿಂದ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್‌ ಜನ್ಯ ನಿರ್ದೇಶಿಸಿದ ರಿಯಲ್‌ ಸ್ಟಾರ್‌ ಉಪೇಂದ್ರ , ರಾಜ್‌ ಬಿ. ಶೆಟ್ಟಿ ಸಹಿತ ತಾನು ನಟಿಸಿದ ಫಾರ್ಟಿಫೈವ್‌ ಚಿತ್ರ ತೆರೆಕಾಣಲಿದೆ. ಇನ್ನೊಂದು ಚಿತ್ರದ ಮಾತುಕತೆ ನಡೆಯುತ್ತಿದ್ದು, ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.

ಗೀತಾ ಶಿವರಾಜ್‌ ಕುಮಾರ್‌, ನಿರ್ಮಾಪಕ ಶ್ರೀಕಾಂತ್‌, ರಾಜೇಶ್‌ ಭಟ್‌, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್‌ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿವರಾಜ್‌ಕುಮಾರ್‌ ಅವರು ಬಿ.ಸಿ. ರೋಡಿನ ಶ್ರೀ ವನದುರ್ಗಾ ಕ್ಷೇತ್ರಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next