Advertisement

ಕೊರಟಗೆರೆ: ಕ್ಯಾಂಟರ್ ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ರೈತ ದಾರುಣ ಸಾವು

09:36 PM Sep 22, 2022 | Team Udayavani |

ಕೊರಟಗೆರೆ: ಡೈರಿಗೆ ಹಾಲು ಹಾಕಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ ರೈತ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಕೋಳಾಲ ಹೋಬಳಿಯ ತಣ್ಣೇನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

Advertisement

ಎ.ವೆಂಕಟಾಪುರ ಗ್ರಾಮದ ರಾಜಣ್ಣ(42) ಮೃತ ದುರ್ದೈವಿ. ಡೈರಿಗೆ ಹಾಲು ಹಾಕಲು ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಅತೀ ವೇಗವಾಗಿ ಮತ್ತು ಆಜಾಗರೂಕತೆಯಿಂದ ಬಂದ ಕ್ಯಾಂಟರ್ ಏಕಾಏಕಿ ಢಿಕ್ಕಿ ಹೊಡೆದ ಪರಿಣಾಮ ರಾಜಣ್ಣನ ತಲೆಗೆ ತೀವ್ರತರ ಪೆಟ್ಟಾಗಿ ರಕ್ತಸ್ರಾವವಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಕೊನೆ ಉಸಿರೆಳೆದಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ. ಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next