Advertisement

ಕೊರಟಗೆರೆ: ಎರಡು ಬೈಕ್ ಗಳ ನಡುವೆ ಅಪಘಾತ

12:30 PM Sep 28, 2022 | Team Udayavani |

ಕೊರಟಗೆರೆ: ಪಟ್ಟಣದ ಹೊರವಲಯದ ದೊಡ್ಡೆಗೌಡ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬೈಕ್ ಸವಾರ ನರಸಿಂಹಮೂರ್ತಿ (58) ಪೆಟ್ರೋಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್ ಕಡೆ ಬೈಕ್ ತಿರುಗಿಸುವ ಸಂರ್ಭದಲ್ಲಿ ಹಿಂದಿನಿಂದ ಮತ್ತೊಂದು ಬೈಕ್ ಸವಾರ ಅತೀ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಈ ಪರಿಣಾಮ ಬೈಕ್ ಸವಾರ ನರಸಿಂಹಮೂರ್ತಿ ಗೆ ಬಲಭುಜದ ಮೂಳೆ ಮುರಿದಿದ್ದು, ಗಾಯಾಳನ್ನು ಕೊರಟಗೆರೆ ಸಾರ್ವಜನಿಕ ‌ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾಲಕ್ಷ್ಮಮ್ಮ ಎಂಬವರು ನೀಡಿದ ದೂರಿನ ಮೇರೆಗೆ ‌ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಪಿಎಸ್ಐ ನಾಗರಾಜು ಬಿ., ಸಿಬ್ಬಂದಿಗಳಾದ ಎಸ್.ಐ. ಧರ್ಮೇಗೌಡ, ಮುಖ್ಯ ಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next