Advertisement

ಕೊರಟಗೆರೆ: ಫ್ಲೆಕ್ಸ್ ವಿಚಾರವಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಬೀದಿರಂಪ

07:46 PM Aug 17, 2022 | Team Udayavani |

ಕೊರಟಗೆರೆ: ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಕಟ್ಟುವ ವಿಚಾರವಾಗಿ ಮಂಗಳವಾರ ರಾತ್ರಿ ಪಟ್ಟಣದಲ್ಲಿ ಬೀದಿರಂಪ ಮಾಡಿಕೊಂಡಿರುವ ಘಟನೆ  ನಡೆದಿದೆ.

Advertisement

ಪಟ್ಟಣದ ಎಸ್ಎಸ್ ಆರ್ ವೃತ್ತದಲ್ಲಿ ಆ 18 ರಂದು ಜೆಡಿಎಸ್ ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಹುಟ್ಟು ಆಚರಣೆ ಹಿನ್ನೆಲೆಯಲ್ಲಿ ಫ್ಲೆಕ್ಸ್ ಕಟ್ಟಲು ಮುಂದಾದ ಜೆಡಿಎಸ್ ಕಾರ್ಯಕರ್ತರು ಆ.8 ರಂದು ಹುಟ್ಟಿದ ಹಬ್ಬವನ್ನು ಆಚರಣೆ ಮಾಡಿಕೊಂಡಿದ್ದ ಹಾಲಿ ಶಾಸಕ ಡಾ. ಜಿ ಪರಮೇಶ‍್ವರ್ ಅವರ ಫ್ಲೆಕ್ಸ್ ತೆರವಿಗೆ ಮುಂದಾದ ಸಂದರ್ಭದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಮಾರಾಮಾರಿ ಮಾಡಿಕೊಂಡಿದ್ದಾರೆ.

ಕೆಲವು ಕಾರ್ಯಕರ್ತರು ಆವಾಚ್ಯ ಪದಗಳ ಬಳಕೆ ಮಾಡಿಕೊಂಡು ಬೀದಿ ರಂಪ ಮಾಡಿಕೊಂಡಿದ್ದಾರೆ ನಂತರ ರಾತ್ರಿ ಪಾಳಿಯ ಪಿಎಸ್ಐ ಮಂಜುಳಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಿ, ಪರಿಸ್ಥಿತಿ ತಿಳಿಗೊಳಿಸಿ ಠಾಣೆಗೆ ಕರೆಸಿ ಬುದ್ದಿಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಚುನಾವಣೆ ನಡೆಯಲು ಇನ್ನೂ ಹಲವು ತಿಂಗಳುಗಳು ಇದ್ದರೂ ಸಹ ಈಗಾಗಲೇ ಬೀದಿರಂಪ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದರೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ ಹಾಲಿ ಮತ್ತು ಮಾಜಿ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next