Advertisement

ಅಪರಿಚಿತ ವಾಹನ ಢಿಕ್ಕಿ ಹೊಡೆದು ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಸಾವು

06:12 PM Jun 13, 2022 | Team Udayavani |

ಕೊರಟಗೆರೆ : 7ನೇ ತರಗತಿ ವಿದ್ಯಾರ್ಥಿಯೋರ್ವ ಸೈಕಲ್ ನಲ್ಲಿ ಶಾಲೆಗೆ ಆಗಮಿಸುವಾಗ ಹಿಂಬದಿಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಗ್ರಾಮದ ಕೃಷ್ಣಪ್ಪ ಅವರ ಮಗ ಕೇಶವ (12 ವರ್ಷ) ಸಾವಿಗೀಡಾದ ವಿದ್ಯಾರ್ಥಿಯಾಗಿದ್ದು, ಈತ ಜಂಪೇನಹಳ್ಳಿಯಿಂದ ಕೊರಟಗೆರೆ ಟೌನ್ ಗೌರಿನಿಲಯ ಶಾಲೆಗೆ ಬರುತ್ತಿರುವಾಗ, ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಮೃತ ಕೇಶವ ಕೊರಟಗೆರೆ ಪಟ್ಟಣದ ಗೌರಿ ನಿಲಯ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು , ಸೈಕಲ್ ನಲ್ಲಿ ಶಾಲೆಗೆ ಬರುವಾಗ ಹಿಂಬದಿಯಿಂದ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾನೆ ಈ ವೇಳೆ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ : ಹಳೆಯಂಗಡಿ : ಸ್ಕೂಟರ್‌ಗೆ ಡಿಕ್ಕಿ ಹೊಡೆದ ಟೆಂಪೋ: ಸವಾರ ಗಂಭೀರ

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next