Advertisement

ಮನೆ ಬಿಟ್ಟು ತವರು ಮನೆಗೆ ಹೋದ ಪತ್ನಿ : ಮನನೊಂದ ಪತಿ ಆತ್ಮಹತ್ಯೆಗೆ ಶರಣು

10:23 PM Jun 13, 2022 | Team Udayavani |

ಕೊರಟಗೆರೆ : ಮನೆ ಬಿಟ್ಟು ತವರು ಮನೆಗೆ ಹೋದ ಪತ್ನಿಯ ನೆನೆಪಿನಲ್ಲಿ ಮನನೊಂದ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೆನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಮರೆನಾಯಕನಹಳ್ಳಿ ಗ್ರಾಮದ ಶಿವಪ್ರಸಾದ್ (45) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾನೆ.

ತನ್ನ ಅಕ್ಕನ ಮಗಳನ್ನೇ ಮದುವೆಯಾಗಿದ್ದ ಶಿವಪ್ರಸಾದ್ ನ ಸಂಸಾರದಲ್ಲಿ ಅನ್ಯೋನ್ಯತೆ ಇಲ್ಲದೆ ಹೆಂಡತಿಯು ಮನೆ ಬಿಟ್ಟು ತವರು ಮನೆಗೆ ಹೋಗಿ ವಾಸವಿದ್ದಳು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಿವಪ್ರಸಾದ್ ರಾತ್ರಿ 9 ಗಂಟೆಗೆ ಊಟ ಮಾಡಿ ಮನೆಯಿಂದ ಹೊರ ಹೋಗಿ ಪಕ್ಕದ ಜಮೀನಿನಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು, ಎಎಸ್ಐ ಯೋಗೀಶ್, ಮುಖ್ಯಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಪಾಕ್‌ 3-0 ಕ್ಲೀನ್‌ ಸ್ವೀಪ್‌ ಸಾಧನೆ: ವಿಂಡೀಸ್‌ಗೆ ಸತತ 3ನೇ ಏಕದಿನದಲ್ಲೂ ಸೋಲು

Advertisement
Advertisement

Udayavani is now on Telegram. Click here to join our channel and stay updated with the latest news.

Next