Advertisement

ಕೊರಟಗೆರೆ: ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ

03:10 PM Aug 17, 2022 | Team Udayavani |

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಹನುಮಂತ ಪುರ ಗ್ರಾಮದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಬುಧವಾರ ಮಧ್ಯಾಹ್ನ ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ಶೋಧನೆ ಮಾಡಿ 12 ಅಡಿ ಉದ್ದದ ಒಂದು ಹಸಿ ಗಾಂಜಾ ಗಿಡ ಬೆಳೆದಿರುವುದನ್ನು ಪತ್ತೆ ಹಚ್ಚಲಾಗಿದ್ದು,2.225 ಕೆ.ಜಿ ತೂಕವಿದೆ. ಎನ್ ಡಿಪಿಎಸ್ ಕಾಯ್ದೆಯಡಿ  ಪ್ರಕರಣ ದಾಖಲಿಸಲಾಗಿದೆ.

ಅಬಕಾರಿ ನಿರೀಕ್ಷಕರಾದ ಶ್ರೀಲತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಉಪನೀರೀಕ್ಷಕರಾದ ವೈಷ್ಣವಿ ಕುಲಕರ್ಣಿ ಸಿಬಂದಿಗಳಾದ ಮಲ್ಲಿಕಾರ್ಜುನ್,ಮಂಜುಳಾ ಮಧು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next