Advertisement

ಕೊರಟಗೆರೆ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆ

09:56 PM Jun 30, 2022 | Team Udayavani |

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬಂಡೇಹಳ್ಳಿ ಗ್ರಾಮದ ಸಿದ್ದರಾಜು ಖಾದ್ರಪ್ಪ(55) ಉಗ್ರನಹಳ್ಳಿ ಎಂಬಲ್ಲಿ ಹುಣಸೆ ಮರಕ್ಕೆ ಟವೆಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

ಮೃತನು ಕೂಲಿ ಕೆಲಸ ಮಾಡಿಕೊಂಡಿದ್ದು ಜೂನ್ 29 ರಂದು ಎಂದಿನಂತೆ ಕೆಲಸಕ್ಕೆ ಹೊಗಿದ್ದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಭೀಮಯ್ಯ ರವರ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.

ಸಿದ್ದರಾಜು ಆ ಪುತ್ರಿ ನಂದಿನಿ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು .ಬಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next