Advertisement

Koratagere: ಹೊಟ್ಟೆ ನೋವಿನ ಬಾಧೆ ತಾಳಲಾರದೆ ಎಂಕಾಂ ವಿದ್ಯಾರ್ಥಿ ಆತ್ಮಹತ್ಯೆ

09:55 PM Mar 06, 2024 | Team Udayavani |

ಕೊರಟಗೆರೆ : ಎಂಕಾಂ ವಿದ್ಯಾರ್ಥಿ ಯೋರ್ವ ಹೊಟ್ಟೆ ನೋವಿನ ಬಾಧೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋವಿನಕೆರೆ ಹೋಬಳಿ ಚಿಕ್ಕ ಸಂಜೀವೇಗೌಡನಪಾಳ್ಯದಲ್ಲಿ ನಡೆದಿದೆ.

Advertisement

ಹನುಮಂತರಾಜು (22 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದು, ಈತ ಇದ್ದಕ್ಕಿದ್ದಂತೆ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕಠಿಣ ನಿರ್ಧಾರ ತಳೆಯಲು ಹೊಟ್ಟೆ ನೋವಿನ ಬಾಧೆ ಕಾರಣ ಎಂದು ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಅನಿಲ್ ಹಾಗೂ ಪಿಎಸ್ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next