Advertisement

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

09:10 PM Mar 15, 2024 | Team Udayavani |

ಕೊರಟಗೆರೆ: ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದ ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ತಾಲೂಕಿನ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು ಕಡೆಯಿಂದ ಬರುತ್ತಿದ್ದ ಎಸ್ ಯುವಿ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದಂತಹ ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರನಾಗಿದ್ದ ಮಧುಗಿರಿ ತಾಲೂಕಿನ ಬೆಲ್ಲದಮಡಗು ಗ್ರಾಮದ ಕೃಷ್ಣಮೂರ್ತಿ(55) ಮೃತಪಟ್ಟಿದ್ದಾರೆ.

ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಪ್ರಸನ್ನ ಎನ್ನುವ ವ್ಯಕ್ತಿಗೆ ಎಡಗೈ ಮತ್ತು ಎಡಗಾಲು ತುಂಡಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಬೈಕ್‍ಗೆ ಢಿಕ್ಕಿ ಹೊಡೆದ ಬಳಿಕ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದು ಬಲವಾದ ಪೆಟ್ಟು ಬಿದ್ದಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ತಡವಾಗಿ ಬಂದ ತುರ್ತು ವಾಹನ
ತಾಲೂಕಿನಲ್ಲಿ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದಂತೆ ಸ್ಥಳೀಯರು ತುರ್ತು ವಾಹನಕ್ಕೆ ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ಬಾರದೆ 40 ನಿಮಿಷದ ಬಳಿಕ ತುರ್ತು ವಾಹನ ಸ್ಥಳಕ್ಕೆ ಬಂದಿದ್ದು, ಪದೇ ಪದೇ ಇಂತಹ ಅಪಘಾತಗಳು ಸಂಭವಿಸಿದರೆ ಸ್ಥಳಕ್ಕೆ ಸಮಯಕ್ಕೆ ಬರುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅಪಘಾತ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಪಿಐ ಅನಿಲ್, ಪಿಎಸ್‍ಐ ಮಂಜುನಾಥ್ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದು, ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next