Advertisement

Koratagere: ಕುಡಿಯುವ ನೀರಿಗಾಗಿ ಪಂಚಾಯಿತಿ ಇ ಓ ಕಚೇರಿಗೆ ಮುತ್ತಿಗೆ

07:30 PM Jan 07, 2024 | Team Udayavani |

ಕೊರಟಗೆರೆ: ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿಮಾರನಹಳ್ಳಿ ಗ್ರಾಮಕ್ಕೆ ಸುಮಾರು ಹತ್ತು ತಿಂಗಳಿನಿಂದ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಓ ಅಪೂರ್ವ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

Advertisement

ಹಂಚಿಮಾರನಹಳ್ಳಿ ಗ್ರಾಮಸ್ಥರು ಕಳೆದ 10 ತಿಂಗಳಿಂದ ನೀರಿಲ್ಲದೇ ಪರದಾಡುತ್ತಿದ್ದಾರೆ. ತಾಲ್ಲೂಕು ಪಂಚಾಯಿತಿ ಇಓ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಗ್ರಾಮಸ್ಥರು ಸಮಸ್ಯೆಯನ್ನು ತಂದರು ಸಹ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಂಚಿಮಾರನಹಳ್ಳಿ ಗ್ರಾಮಸ್ಥರಿಗೆ ಪ್ರಾಣ ಸಂಕಟವಾಗಿದೆ. ಪ್ರತಿ ನಿತ್ಯದ ನಿತ್ಯ ಕರ್ಮಗಳಿಗೂ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿಮಾರನಹಳ್ಳಿ ಗ್ರಾಮಸ್ಥರ ಗೋಳು ಯಾರು ಕೇಳೋರೋ ಯಾರು…?ಎನ್ನುವ ಪ್ರಶ್ನೆ ಎದುರಾಗಿದೆ.

ಕೊಳವೆ ಬಾವಿ ಕೊರೆಸಲು ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಡುವೆ ಭಾರಿ ತಿಕ್ಕಾಟ ತಾರಕಕ್ಕೇರಿದೆ.

Advertisement

ಗ್ರಾಮಸ್ಥರ ಮುತ್ತಿಗೆಗೂ ಬಗ್ಗದ ತಾಲ್ಲೂಕು ಪಂಚಾಯಿತಿ ಇಓ ಅಪೂರ್ವ ವಿರುದ್ದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳವೆ ಬಾವಿಗಾಗಿ ಖಾಸಗಿ ಜಮೀನು ಮಾಲೀಕ ಮತ್ತು ಗ್ರಾಮಸ್ಥರ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ.

ಗ್ರಾಮಸ್ಥರ ಮನವಿಯನ್ನು ಸ್ವೀಕರಿಸದೇ ಗಂಟೆಗಟ್ಟಲೆ ಗ್ರಾಮಸ್ಥರನ್ನು ಕಾಯಿಸಿ ಇಂಗ್ಲಿಷ್ ನಲ್ಲಿಯೇ ಮುಗ್ದ ಜನರಿಗೆ ಉತ್ತರ ಕೊಟ್ಟ ಇ ಓ ಅಪೂರ್ವ ವಿರುದ್ಧ ಗ್ರಾಮಸ್ಥರ ಆಕ್ರೋಶದ ಸುರಿಮಳೆಗೈದರು.

Advertisement

Udayavani is now on Telegram. Click here to join our channel and stay updated with the latest news.

Next