Advertisement

ಕೊರಟಗೆರೆ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ.

07:48 PM Jan 05, 2022 | Team Udayavani |

 

Advertisement

ಕೊರಟಗೆರೆ: ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ರಾತ್ರಿ 9.30ರ ಸಮಯದಲ್ಲಿ ಊಟ ಮಾಡಿ ಪೋಷಕರು ಮಲಗಿದ ನಂತರ ರಾತ್ರಿ ವೇಳೆ ತನ್ನ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ತಾಲ್ಲೂಕಿನ ತುಂಬಾಡಿ ಗ್ರಾಮದ ಶ್ರೀನಿವಾಸ ಚಾರ್ ಮಗಳು ಹೇಮಲತಾ(17) ಆತ್ಮಹತ್ಯೆ ಮಾಡಿಕೊಂಡಿರುವಳು.

ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೇಮಲತಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಮಲಗಿದ ನಂತರ ಓದಿಕೊಳ್ಳಲೆಂದು ರೂಮಿನ ಒಳಗೆ ಹೋದವಳು ಬೆಳಿಗ್ಗೆ 9 ಗಂಟೆಯಾದರೂ ಹೊರಗೆ ಬಾರದ ಕಾರಣ ಬಾಗಿಲು ಒಡೆದು ನೋಡಿದಾಗ ಫ್ಯಾನ್ ಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ.

ಈ ಸಂಭಂದ ಮೃತಳ ತಾತ ಹನುಮಂತ ಚಾರ್ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪಿಎಸ್ಐ ನಾಗರಾಜು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next