Advertisement

ಕೊರಟಗೆರೆ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

09:21 PM Aug 05, 2022 | Team Udayavani |

ಕೊರಟಗೆರೆ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮೂಡಲಪಣ್ಣೆಯ ಮಲ್ಲಮ್ಮ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.

Advertisement

ನವೀನ್ ಕುಮಾರ್(27) ಆತ್ಮಹತ್ಯೆ ಮಾಡಿಕೊಂಡ ಯುವಕ.

ಟೀ ಅಂಗಡಿ ವ್ಯಾಪಾರಿ ಆಗಿರುವ ನವೀನ್ ರಾತ್ರಿ 8 ಗಂಟೆಯ ವೇಳೆ ಮನೆಯಿಂದ, ಅವರ ಅಕ್ಕಳನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಬರುತ್ತೇನೆಂದು ಹೇಳಿ ಹೋಗಿದ್ದು,  ಅಂಗಡಿಯ ಮೇಲಿರುವ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪಿಎಸ್ಐ ನಾಗರಾಜು. ಬಿ ಮುಖ್ಯಪೇದೆ ಪುರುಷೋತ್ತಮ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next