Advertisement

ಕೊರವಡಿ : ಚಿಕಿತ್ಸೆ ಫಲಕಾರಿಯಾಗದೆ ಕುಮಾರಿ ಶ್ರಾವ್ಯ ನಿಧನ

10:15 AM Oct 20, 2019 | sudhir |

ತೆಕ್ಕಟ್ಟೆ : ಕಳೆದ ಒಂದುವರೆ ವರುಷಗಳಿಂದ ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿ ನಿವಾಸಿ ಉದಯ ಅವರ ಪುತ್ರಿ ಶ್ರಾವ್ಯ(10) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಬಡ ಕುಟುಂಬಕ್ಕೆ ಚಿಕಿತ್ಸಾ ವೆಚ್ಚ ಭರಿಸಲಾಗದೆ ಅಸಹಾಯಕ ಸ್ಥಿತಿಯಲ್ಲಿದೆ ಎನ್ನುವ ಈ ಕುರಿತು ಉದಯವಾಣಿ ವಿಸ್ತೃತವಾದ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅದೆಷ್ಟೋ ಮನ ಮಿಡಿಯುವ ಕೈಂಕರ್ಯದಲ್ಲಿ ಸಂಘ ಸಂಸ್ಥೆಗಳು ಮುಂದೆ ಬಂತು ಮಾನವೀಯವಾಗಿ ಸ್ಪಂದಿಸಿದೆ ಆದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಅ.19 ರಂದು ಬೆಂಗಳೂರಿನ ಮುಜುಂದಾರ್ ಶಾ ಮೆಡಿಕಲ್ ಸೆಂಟರ್‌ನಲ್ಲಿ ಅಸುನೀಗಿದ್ದಾಳೆ .

Advertisement

ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರಾವ್ಯ ಅತ್ಯಂತ ಪ್ರತಿಭಾವಂತೆ ವಿದ್ಯಾರ್ಥಿನಿಯಾಗಿದ್ದಳು. ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದ ಮುಜುಂದಾರ್ ಶಾ ಮೆಡಿಕಲ್ ಸೆಂಟರ್‌ನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.

ಅ.20 ಅಂತ್ಯಕ್ರಿಯೆ : ಮೃತ ಶ್ರಾವ್ಯಳ ಅಂತಿಮ ಸಂಸ್ಕಾರವು ತಾಯಿ ಮನೆ ಕೋಡಿ ಕನ್ಯಾನ ಮಹಾಸತೀಶ್ವರಿ ದೇವಸ್ಥಾನದ ಸಮೀಪ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next