Advertisement

Kota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷ

12:41 AM Oct 01, 2024 | Team Udayavani |

ಕೋಟ: ಕೋಟ ಶ್ರೀ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ.ಕುಂದರ್‌ ಅವರು ಸೋಮವಾರ ಜರಗಿದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಇವರು ಈ ಹಿಂದೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ದೇಗುಲದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಮಿತಿ ಸದಸ್ಯರಾದ ಗಣೇಶ್‌ ಕೆ.ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್‌ ಕಾಂಚನ್‌, ಸುಧಾ ಎ.ಪೂಜಾರಿ, ರತನ್‌ ಐತಾಳ, ಸುಭಾಷ್‌ ಶೆಟ್ಟಿ ಗಿಳಿಯಾರು, ಶಿವ ಪೂಜಾರಿ ಮಣೂರು, ಕೆ.ಚಂದ್ರಶೇಖರ್‌ಆಚಾರ್ಯ ಕೋಟ ಮತ್ತು ಅರ್ಚಕ ಪ್ರತಿನಿಧಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next