Advertisement

Kota: ನವವಿವಾಹಿತೆಯ ದಾರುಣ ಹತ್ಯೆ; ಪತಿಯಿಂದಲೇ ಕೃತ್ಯ ಶಂಕೆ; ಆರೋಪಿ ಪೊಲೀಸ್ ವಶಕ್ಕೆ

12:29 PM Aug 23, 2024 | Team Udayavani |

ಕೋಟ: ಕೇವಲ 8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಹತ್ಯೆಗೀಡಾದ ಘಟನೆ ಸಾಲಿಗ್ರಾಮದ ಕಾರ್ಕಡ ಕಡಿದ್ ಹೆದ್ದಾರಿಯಲ್ಲಿ ಆ.23ರ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

Advertisement

ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು.

ಜಯಶ್ರೀಗೆ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿತ್ತು. ವಿವಾಹದ ನಂತರ ಇವರಿಬ್ಬರು ಕಾರ್ಕಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಪತಿಯಿಂದಲೇ ಕೃತ್ಯ ? : ಕೌಟುಂಬಿಕ ಕಲಹದಿಂದ ಪತಿ ಕಿರಣ್ ಈ ಹತ್ಯೆ ನಡೆಸಿದ್ದಾನೆ ಎನ್ನಲಾಗಿದ್ದು, ಕೋಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next