Advertisement

Kota ರೈತರ ಉಪವಾಸ ಸತ್ಯಾಗ್ರಹ; ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು

11:39 PM Aug 07, 2024 | Team Udayavani |

ಕೋಟ: ತೆಕ್ಕಟ್ಟೆ, ಗಿಳಿಯಾರು, ಚಿತ್ರಪಾಡಿ ಕಾರ್ಕಡ ವರೆಗೆ ಹೊಳೆ ಹೂಳಿನ ಸಮಸ್ಯೆಯಿಂದ ಕೃತಕ ನೆರೆ ಸೃಷ್ಟಿಯಾಗಿದ್ದು, ರೈತರ ಕೃಷಿ ಕೊಳೆಯುತ್ತಿದೆ. ಇದಕ್ಕೆ ಶಾಶ್ವತ ಪರಿಹಾರಕ್ಕಾಗಿ ಹೊಳೆಯ ಹೂಳೆತ್ತ ಬೇಕು, ಘನ ಸೇತುವೆಗಳನ್ನು ನಿರ್ಮಿಸ ಬೇಕು ಎಂದು ಆಗ್ರಹಿಸಿ ರೈತಧ್ವನಿ ಸಂಘಟನೆ ಕೋಟ ನೇತೃತ್ವದಲ್ಲಿ ಆ. 7ರಂದು ಕೋಟ ಹಿರೇಮಹಾಲಿಂಗೇಶ್ವರ ದೇಗುಲದ ಸಮೀಪ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಯಿತು.

Advertisement

ಸಂಘಟಕರಲ್ಲಿ ಓರ್ವರಾದ ಟಿ. ಮಂಜುನಾಥ ಗಿಳಿಯಾರು ಪ್ರಾಸ್ತಾವಿಕ ವಾಗಿ ಮಾತನಾಡಿ, ಈ ಸಮಸ್ಯೆ ಬಗ್ಗೆ ಹಿಂದೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಪರಿಹಾರ ಸಿಗದಿರುವುದರಿಂದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ಹೋರಾಟ ಮಾಡಲಿದ್ದೇವೆ ಎಂದರು.

ಸಣ್ಣ ನೀರಾವರಿ ಸಚಿವರ ಗಮನಕ್ಕೆ
ಕಾಂಗ್ರೆಸ್‌ ಮುಖಂಡ ಮೊಳಹಳ್ಳಿ ದಿನೇಶ್‌ ಹೆಗ್ಡೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಮೌಖೀಕವಾಗಿ ತಿಳಿಸಿದ್ದು, ಮುಂದೆ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ವಿವರಿಸಲಾಗುವುದು ಎಂದರು.

ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, ರೈತರ ಸಂಘಟಿತ ಹೋರಾಟದಿಂದ ಯಶಸ್ಸು ಸಾಧ್ಯವಿದೆ. ನಿಮ್ಮ ಹೋರಾಟಕ್ಕೆ ರೈತ ಸಂಘ ಸಹಕಾರ ನೀಡಲಿದೆ ಎಂದರು.
ಹಿರಿಯ ಕೃಷಿಕ ಶಾನಾಡಿ ಶ್ರೀನಿವಾಸ ಭಟ್‌, ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ. ಕುಂದರ್‌ ಹೋರಾಟಕ್ಕೆ ಸಹಕಾರ ಘೋಷಿಸಿದರು.

ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರೈತಧ್ವನಿ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ, ಕೋಟ ಸಿ.ಎ.ಬ್ಯಾಂಕ್‌ ನಿರ್ದೇಶಕ ತಿಮ್ಮ ಪೂಜಾರಿ, ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಕುಂದರ್‌, ಪ್ರಮುಖರಾದ ಮಲ್ಯಾಡಿ ಶಿವರಾಮ ಶೆಟ್ಟಿ, ನಾಗರಾಜ್‌ ಗಾಣಿಗ, ಮಹೇಶ್‌ ಶೆಟ್ಟಿ, ಕೀತೇìಶ್‌ ಪೂಜಾರಿ ಮೊದಲಾದವರಿದ್ದರು.

Advertisement

ಜಿಲ್ಲಾಧಿಕಾರಿಗಳಿಂದ ಮನವಿ ಸ್ವೀಕಾರ
ಪ್ರತಿಭಟನೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಬ್ರಹ್ಮಾವರ ತಹಶೀಲ್ದಾರ್‌ ಶ್ರೀಕಾಂತ್‌ ಹೆಗ್ಡೆ ಜತೆಗೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next