Advertisement

Kota: ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಅಯ್ಕೆ

05:31 PM Sep 12, 2024 | Team Udayavani |

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರು ಪ್ರತಿಷ್ಠಾನ ಕೋಟ ಸಹಭಾಗಿತ್ವದಲ್ಲಿ ಕೊಡಮಾಡುವ 2024 ನೇ ಸಾಲಿನ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಅಯ್ಕೆಯಾಗಿದ್ದಾರೆ.

Advertisement

ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತ್ತು ಚೌಕಟ್ಟು ನೀಡಿದ  ಅಮೂಲ್ಯ ಸೇವೆಯನ್ನು ಪರಿಗಣಿಸಿ ಪುರಸ್ಕಾರಕ್ಕೆ  ಆಯ್ಕೆ ಮಾಡಲಾಗಿದೆ.

ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ  ಆನಂದ ಸಿ. ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ  ಪುರಸ್ಕಾರಕ್ಕೆ  ನೀಡುತ್ತಾ ಬಂದಿದ್ದು  ವೀರಪ್ಪ ಮೊಯ್ಲಿ, ವೆಂಕಟಾಚಲ,  ಕೆ.ರಾಮಕೃಷ್ಣ ಹಂದೆ,  ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ,  ಜಯಶ್ರೀ, ಶ್ರೀ ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ,  ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ ,  ಗಿರೀಶ್ ಭಾರದ್ವಜ್,  ರಮೇಶ್ ಅರವಿಂದ್,ಡಾ.ವಿದ್ಯಾಭೂಷಣ್ ಅವರು ಈ ಪುರಸ್ಕಾರಕ್ಕೆ ಭಾಜನರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next