Advertisement

ಯುದ್ಧ ವಿಮಾನ ಪ್ರದರ್ಶನಕ್ಕೆ ಪ್ರಸ್ತಾವನೆ

01:17 AM Oct 16, 2019 | Team Udayavani |

ಉಡುಪಿ: ಮುಜರಾಯಿ, ಮೀನುಗಾರಿಕಾ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಕೋಟದ ಡಾ| ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಯುದ್ಧ ವಿಮಾನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆ ಸಲ್ಲಿಸಿದರು.

Advertisement

ಈ ಸಂದರ್ಭ ಸಚಿವ ಕೋಟ ಅವರು ರಾಜ್ಯದ “ಎ’ ದರ್ಜೆ ಮುಜರಾಯಿ ದೇಗುಲಗಳಲ್ಲಿ ಸಾವಿರ ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನುಷ್ಠಾನಗೊಳಿಸುವ ಕುರಿತು ರಕ್ಷಣಾ ಸಚಿವರ ಜತೆ ಚರ್ಚಿಸಿದರು. ಪ್ರಸ್ತಾವನೆಗೆ ರಕ್ಷಣಾ ಸಚಿವ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next