Advertisement

ಕೋಟ ಶ್ರೀನಿವಾಸ್ ಪೂಜಾರಿಗೂ ತಟ್ಟಿದ ಡಿಕೆಶಿ ಬೆಂಬಲಿಗರ ಪ್ರತಿಭಟನೆ ಬಿಸಿ

09:41 AM Sep 05, 2019 | Team Udayavani |

ಶಿವಮೊಗ್ಗ: ಜಿಲ್ಲೆಯ ಪ್ರವಾಸದಲ್ಲಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಡಿಕೆಶಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ಆಗಮಿಸಿದ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳವಾರ ನಡೆಯಿತು.

Advertisement

ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಗಮಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಲು ಓಡಿ ಬಂದರು. ಈ ವೇಳೆ ಪೊಲೀಸರು ಡಿಸಿ ಕಚೇರಿಯ ಹಿಂಬಾಗಿಲಿನಿಂದ ಸಚಿವರನ್ನು ಒಳಗೆ ಕರೆದೊಯ್ದರು. ನಂತರ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ಸಭೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next