Advertisement

ಕೋವಿಡ್ ಕಾರಣದಿಂದ ದೇವಸ್ಥಾನಗಳಿಗೆ 600 ಕೋಟಿ ನಷ್ಟ; ಸಚಿವ ಕೋಟ ಶ್ರೀನಿವಾಸ ಪೂಜಾರಿ

04:04 PM Jun 01, 2020 | keerthan |

ಮಂಗಳೂರು: ಕೋವಿಡ್ 19 ನಿಂದ ಲಾಕ್ ಡೌನ್ ಆದ ಪರಿಣಾಮ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಂದಾಜು 600 ಕೋಟಿ ರೂ. ನಷ್ಟವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಲ್ಲೂರು ದೇವಾಲಯವೊಂದರಲ್ಲಿ ಎಪ್ರಿಲ್ ಮೇ ತಿಂಗಳಲ್ಲಿ14 ಕೋಟಿ ನಷ್ಟವಾಗಿದೆ ‌. ಎಲ್ಲಾ ದೇವಸ್ಥಾನ ಮುಚ್ಚಿದ ಪರಿಣಾಮ ಈ ನಷ್ಟವಾಗಿದೆ. ಎ ದರ್ಜೆ ಮತ್ತು ಬಿ ದರ್ಜೆ ದೇವಸ್ಥಾನಗಳಲ್ಲಿ ವಾರ್ಷಿಕ ಶೇಕಡ 35 ರಷ್ಟು ಆದಾಯ ಕಡಿಮೆಯಾಗಿದೆ ಎಂದು ತಿಳಿಸಿದರು.

ಕೋವಿಡ್-19 ಸೋಂಕಿನಿಂದ ಮುಂದೂಡಲ್ಪಟ್ಟಿರುವ ಸಪ್ತಪದಿ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಸಪ್ತಪದಿ ವಿವಾಹ ಕಾರ್ಯಕ್ರಮ ಎ.26 ಮತ್ತು ಮೇ 24 ರಂದು ನಡೆಯಬೇಕಿತ್ತು. ಆದರೆ ಸೋಂಕಿನ ಕಾರಣದಿಂದ ಅದು ಮುಂದೂಡಲ್ಪಟ್ಟಿದೆ. ಈ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ತಿಳಿಸಿದರು.

ಸಪ್ತಪದಿ ವಿವಾಹಕ್ಕೆ ರಾಜ್ಯಾದಾದ್ಯಂತ 4500 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 1500 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮುಖ್ಯಮಂತ್ರಿಗಳು 50 ಜನರಿದ್ದು ವಿವಾಹ ಕಾರ್ಯಕ್ರಮ ನಡೆಸಬಹುದು ಎಂದು ತಿಳಿಸಿದ್ದಾರೆ. ಅದರಂತೆ ಈ ಬಗ್ಗೆ ಮುಹೂರ್ತ ಸಿದ್ದಪಡಿಸಿ ಸಪ್ತಪದಿ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next