Advertisement

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

03:12 PM Jun 16, 2021 | Team Udayavani |

ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ರಾಜ್ಯಕ್ಕೆ ಬರುತ್ತಿದ್ದಾರೆ. ಸಹಜವಾಗಿ ಸಚಿವರು, ಶಾಸಕರು, ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಭೇಟಿ ಮಾಡುತ್ತಾರೆ. ಅರುಣ್ ಸಿಂಗ್ ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಬರ್ತಿದ್ದಾರೆ. ನಮ್ಮ ಪಕ್ಷದಲ್ಲಿ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಸರ್ಕಾರ ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಸಿಂಗ್ ಕಾಲಕಾಲಕ್ಕೆ ಬರುತ್ತಾರೆ. ಬಂದಾಗ ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಆದರೆ ನಾಯಕತ್ವದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ, ಚೆನ್ನಾಗಿದ್ದೇವೆ. ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದರು.

ಇದನ್ನೂ ಓದಿ:ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲೂ ಚರ್ಚೆ ಆಗಿಲ್ಲ : ಜಗದೀಶ್ ಶೆಟ್ಟರ್

17 ವಲಸಿಗರ ಬಗ್ಗೆ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಈಶ್ವರಪ್ಪ ಏನು ಹೇಳಿದ್ದಾರೆ ಗೊತ್ತಿಲ್ಲ. ತಿಳಿದುಕೊಂಡು ಹೇಳುತ್ತೇನೆ. ಅವರು ನಮಗಿಂತ ತುಂಬಾ ಹಿರಿಯರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next