Advertisement

ಜ್ವರಪೀಡಿತ ಗರ್ಭಿಣಿ ಚಿಕಿತ್ಸೆಗೆ ಅಲೆದಾಟ ಪ್ರಕರಣ ; ತತ್‌ಕ್ಷಣ ವರದಿಗೆ ಕೋಟ ಆದೇಶ

02:25 AM Jul 21, 2020 | Hari Prasad |

ಮಂಗಳೂರು/ ಕಡಬ: ಜ್ವರಪೀಡಿತ ಗರ್ಭಿಣಿಗೆ ವೆನ್ಲಾಕ್‌ ಮತ್ತು ಲೇಡಿಗೋಶನ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸಿದ ಪ್ರಕರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಂಭೀರವಾಗಿ ಪರಿಗಣಿಸಿದ್ದು, ತತ್‌ಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.

Advertisement

ಇದೇವೇಳೆ ಕಡಬ ತಹಶೀಲ್ದಾರ್‌ ಅವರು ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಮತ್ತು ಗರ್ಭಿಣಿಯ ಚಿಕಿತ್ಸೆ, ಆರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಸಚಿವ ಕೋಟ ಅವರು ಸೋಮವಾರ ಸಂಸದ ನಳಿನ್‌, ಶಾಸಕ ವೇದವ್ಯಾಸ ಕಾಮತ್‌ ಜತೆಗೆ ವೆನಾÉಕ್‌ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸುದೀರ್ಘ‌ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು.

ತನಿಖೆಗೆ ಆದೇಶ
ಪ್ರಕರಣದ ಬಗ್ಗೆ ತತ್‌ಕ್ಷಣ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಅಮಾನತಿಗೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು. ನೆಲ್ಯಾಡಿಯ ಮಹಿಳೆಗೆ ಕೂಡಲೇ ಅಗತ್ಯ ಚಿಕಿತ್ಸೆ ನೀಡಲು ಸೂಚಿಸಿದರು.

ಸಂತ್ರಸ್ತೆಯ ಮನೆಗೆ ತಹಶೀಲ್ದಾರ್‌ ಭೇಟಿ
ಪ್ರಕರಣಕ್ಕೆ ಸಂಬಂಧಿಸಿ ಕಡಬ ತಹಶೀಲ್ದಾರ್‌ ಜಾನ್‌ಪ್ರಕಾಶ್‌ ರಾಡ್ರಿಗಸ್‌ ನೆಲ್ಯಾಡಿಯ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯನ್ನು ಸೋಮವಾರ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳ ಪಡಿಸಲಾಗಿದೆ. ಜ್ವರ ಕಡಿಮೆಯಾಗಿದ್ದು, ಆರೋಗ್ಯವಾಗಿದ್ದಾರೆ. ಮಹಿಳೆಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು.

Advertisement

ಕಂದಾಯ ನಿರೀಕ್ಷಕ ಅವಿನ್‌ ರಂಗತ್‌ಮಲೆ ಅವರು ಜತೆಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಉನ್ನತ ಮಟ್ಟದ ತನಿಖೆ ಈಗಾಗಲೇ ಆರಂಭಗೊಂಡಿದೆ. ಸಂತ್ರಸ್ತ ಮಹಿಳೆಯ ಮನೆಯವರಿಗೆ ಮಂಗಳವಾರ (ಜು. 21) ತನಿಖಾ ತಂಡದ ಮುಂದೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ.

– ಡಾ| ರತ್ನಾಕರ್‌, ಪ್ರಭಾರ DHO, ಮಂಗಳೂರು

Advertisement

Udayavani is now on Telegram. Click here to join our channel and stay updated with the latest news.

Next