Advertisement
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳ ವಾರ ಸಾರ್ವಜನಿಕರು, ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರ್ಷನ ಕುಟುಂಬಕ್ಕೆ ಯಾವುದೇ ಸಮಸ್ಯೆಯಾಗದಂತೆ ಸರಕಾರ, ಬಿಜೆಪಿ, ಹಿಂದೂ ಸಮಾಜ ನೋಡಿಕೊಂಡಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ ಎಂಬುದು ತಿಳಿದಿದೆ. ಹರ್ಷನ ಕೊಲೆಯ ಆರೋಪಿಗೆ ಕಠಿನ ಶಿಕ್ಷೆಯಾಗಲಿದೆ ಎಂದರು.
Related Articles
Advertisement
ಕೇಂದ್ರ ಸರಕಾರ ಉಕ್ರೇನ್ನಲ್ಲಿ ರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಅಲ್ಲದೆ, ಇದಕ್ಕಾಗಿ ನಾಲ್ಕು ಸಚಿವರನ್ನು ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿಯನ್ನು ಸಮರ್ಥವಾಗಿ ಕೇಂದ್ರ ಸರಕಾರ ನಿಭಾಯಿಸುತ್ತಿದೆ ಎಂದರು.
ಸುಮಾರು ಎರಡು ಗಂಟೆಗಳ ಕಾಲ ಸಾರ್ವಜನಿಕರ ಹಾಗೂ ಪಕ್ಷದ ಕಾರ್ಯಕರ್ತರ ವಿವಿಧ ಅಹವಾಲು ಗಳನ್ನು ಸ್ವೀಕರಿಸಿ, ಸಮಸ್ಯೆಗೆ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.