Advertisement

ಪಂಚರಾಜ್ಯ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಗೆ ರಾಜ್ಯದಲ್ಲೂ ಸೋಲುವ ಭೀತಿ ಎದುರಾಗಿದೆ : ಕೋಟ

02:53 PM May 05, 2022 | sudhir |

ಬೆಂಗಳೂರು : ಪಂಚರಾಜ್ಯ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಕರ್ನಾಟಕದಲ್ಲೂ ಸೋಲುವ ಭೀತಿ ಎದುರಾಗಿದೆ ಹಾಗಾಗಿ ಹತಾಶೆಯಿಂದ ಬಿಜೆಪಿಯವರು ಏನೇ ಅಭಿವೃದ್ಧಿ ಕೆಲಸ ಮಾಡಿದರೂ ಅದಕ್ಕೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ ಕಾಂಗ್ರೆಸ್ ಹತಾಶೆ ಭಾವನೆಗೆ ಒಳಗಾಗಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮರೆ ಮಾಚಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸರ್ಕಾರದ ಹೆಸರು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರಿಗೆ ಕರ್ನಾಕದಲ್ಲಿಯೂ ಸೋಲುವ ಬೀತಿ ಎದುರಾಗಿದೆ. ರಾಜ್ಯ ಎಸ್ಸಿ ಎಸ್ಟಿ ಹಾಗೂ ಹಿಂದುಳಿದ ವರ್ಗದ ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ.

ಪಿಎಸ್ ಐ ಪರೀಕ್ಷಾ ಅಕ್ರಮದ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ಸತ್ಯಕ್ಕೆ ಅಪಚಾರ ಮಾಡುವ ಕೆಲಸ ಮಾಡುತ್ತಿವೆ. ಇದರಲ್ಲಿ ಸರ್ಕಾರದ ಪಾತ್ರ ಯಾವುದೇ ಇಲ್ಲ. ಈಗಾಗಲೇ ಈ ಪ್ರಕರಣದಲ್ಲಿ ಪಾಲುದಾರರಾದವರನ್ನು ಬಂಧಿಸಲಾಗಿದೆ ಅಲ್ಲದೆ ತನಿಖೆ ಕೂಡಾ ನಡೆಯುತ್ತಿದೆ ಸತ್ಯಂಶ ಹೊರಬರಲಿದೆ ಎಂದರು.

ಇದನ್ನೂ ಓದಿ :ಬಿಜೆಪಿಯಲ್ಲಿ ಮರಿ ಪುಡಾರಿಗಳದ್ದೇ ಹಾವಳಿ: ಮಂಜುನಾಥ್ ಗೌಡ

Advertisement
Advertisement

Udayavani is now on Telegram. Click here to join our channel and stay updated with the latest news.

Next