Advertisement
ರವಿವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಪೌರಾಡಳಿತ ಸಂಸ್ಥೆಗಳು ಅತಂತ್ರವಾಗಿವೆ. ಸ್ಥಳೀಯ ಆಡಳಿತಗಳಿಗೆ ಸ್ವತಂತ್ರ ಆಡಳಿತ ಅವಕಾಶ ಕಲ್ಪಿಸುವುದಾಗಿ ಹೇಳುತ್ತಿರುವ ಸರಕಾರಗಳೇ ರಾಜಕೀಯ ಪ್ರವೇಶಕ್ಕೆ ಆಸ್ಪದ ನೀಡುತ್ತಿವೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದು, ಅವರಿಗೆ 109 ನಗರಾಡಳಿತಗಳ ಆಡಳಿತ ಬೇಕಾಗಿಲ್ಲ ಎಂಬಂತೆ ತೋರುತ್ತಿದೆ ಎಂದು ಟೀಕಿಸಿದ ಅವರು, ಚುನಾವಣೆ ನಡೆದ ಎಲ್ಲ ನಗರಾಡಳಿತ ಸಂಸ್ಥೆಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕೂಡಲೇ ನಡೆಯ ಬೇಕು. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದರು. ಕರಾವಳಿಗೆ 1,000 ಕೋ.ರೂ. ಬೇಕು
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭೀಕರ ಬರಗಾಲ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಲಾಗಿದೆ. ಆದರೆ ಬಜೆಟ್ನಲ್ಲಿ 200 ಕೋಟಿ ರೂ. ಮಾತ್ರ ಮೀಸಲಿಟ್ಟಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳು ಕರಾವಳಿಯ ಹಿತಾಸಕ್ತಿಯನ್ನು ಅವಗಣಿಸಿದ್ದಾರೆ ಎಂದು ಶ್ರೀನಿವಾಸ ಪೂಜಾರಿ ಟೀಕಿಸಿದರು.
Related Articles
Advertisement
ಜಿಂದಾಲ್ಗೆ ಪುಡಿಗಾಸಿಗೆ 3,666 ಎಕರೆ ಭೂಮಿ ನೀಡುವುದು ಸರಿಯಲ್ಲಜಿಂದಾಲ್ ಕಂಪೆನಿಗೆ ಪುಡಿಗಾಸಿಗೆ 3,666 ಎಕರೆಯಷ್ಟು ಕೋಟ್ಯಂತರ ರೂ. ಬೆಲೆಬಾಳುವ ಭೂಮಿಯನ್ನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದ್ದು, ಇದು ಸರಿಯಲ್ಲ. ತೀರ್ಮಾನವನ್ನು ಕೂಡಲೇ ಕೈಬಿಡಬೇಕು ಎಂದರು. ಜೂ. 5ರಂದು ಬಿಜೆಪಿ ಶಾಸಕಾಂಗ ಸಭೆ
13,000 ಕೋಟಿ ರೂ.ಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿ ಕೊಂಡಿರುವ ಸರಕಾರ, ಅದರ ಗುತ್ತಿಗೆದಾರರಿಗೆ ಮೊತ್ತ ಪಾವತಿಸುವ ಲೆಕ್ಕಾಚಾರದಲ್ಲಿ ಇದೆ. ಹಾಸನದಲ್ಲಿ ಸಚಿವ ರೇವಣ್ಣ ಅವರು ಕೈಗೊಂಡ ನೀರಾವರಿ ಸಹಿತ ಎಲ್ಲ ಯೋಜನೆಗಳಲ್ಲಿ ಕಾಮಗಾರಿ ನಡೆಸದೆ ಬಿಲ್ ಪಾವತಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರೇ ಆರೋಪಿಸಿದ್ದಾರೆ. ಈ ಎಲ್ಲ ವಿಷಯಗಳ ಕುರಿತು ಜೂ.5ರಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪ ಅವರು ಚರ್ಚೆ ನಡೆಸಲಿದ್ದಾರೆ. ಸರಕಾರದ ವೈಫಲ್ಯಗಳ ವಿರುದ್ಧ ಅಧಿವೇಶದಲ್ಲಿ ಹೋರಾಟ ನಡೆಸಲು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.