Advertisement

ದ.ಕ ಜಿಲ್ಲೆಯಲ್ಲಿ ಸಚಿವ ಕೋಟಾರಿಂದ ಸೋಂಕು ನಿಯಂತ್ರಣ ಕುರಿತು ಅಧಿಕಾರಿಗಳ ಸಭೆ

06:33 PM Apr 17, 2020 | keerthan |

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೈಗೊಳ್ಳ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

Advertisement

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದರು, ಶಾಸಕರು ಅಧಿಕಾರಿಗಳ ಭಾಗಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಯಿತು.

ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲೆಯಲ್ಲಿ ಜಿಲ್ಲಾಡಳಿತ ವೈದ್ಯಕೀಯ ತಂಡ ಕೋವಿಡ್-19 ವಿರುದ್ದ ಸಮರಕ್ಜೆ ಸನ್ನದವಾಗಿದೆ. ಜಿಲ್ಲೆಯಲ್ಲಿ ಒಟ್ಟು ಹನ್ನೆರಡು ಪ್ರಕರಣಗಳು ಬೆಳಕಿಗೆ ಬಂದಿದ್ದು. ಈ ವರೆಗೆ ಜಿಲ್ಲೆಯಲ್ಲಿ ಒಂಬತ್ತು ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. ಇನ್ನೂ ಮೂರು ಸೋಂಕಿತರ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳಿಸಲಾಗಿದೆ.

ಈಗಾಲೇ ಒಂದು ವರದಿ ನೆಗೆಟಿವ್ ಲಭಿಸಿದ್ದು, ನಾಳೆ ಮೂರು ವರದಿ ನೆಗೆಟಿವ್ ಬಂದರೆ ಬಿಡುಗಡೆ ಮಾಡಲಾಗುವುದು. ಈಗ ಮತ್ತೊಂದು ಸೋಂಕು ಪ್ರಕರಣ ಬಂದಿದ್ದು, ಅದು ಕೂಡಾ ಗುಣಮುಖವಾಗುವ ವಿಶ್ವಾಸವಿದೆ ಎಂದು ಕೋಟಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next