Advertisement

ಕೋಟ ಶ್ರೀನಿವಾಸ ಪೂಜಾರಿ ಮನೆ ಮನೆ ಭೆೇಟಿ

01:00 AM Mar 11, 2019 | Harsha Rao |

ಕೋಟೇಶ್ವರ: ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮೂಡುಗೋಪಾಡಿಯಲ್ಲಿ ಮೇರಾ ಪರಿವಾರ್‌ ಬಿಜೆಪಿ ಪರಿವಾರ್‌ ಅಭಿಯಾನದಡಿ ಮನೆಮನೆಗೆ ತೆರಳಿ ಪಕ್ಷದ ಬಾವುಟ ನೀಡುವುದರ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಪ್ರಚಾರ ಕಾರ್ಯ ಆರಂಭಿಸಿದರು.

Advertisement

ಕೇಂದ್ರ ಸರಕಾರದ ಸಾಧನೆಯನ್ನು ವಿವರಿಸಿದ ಅವರು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಮುಂದಿನ 5 ವರ್ಷ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ಇನ್ನಷ್ಟು ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ ಎಂದರು.  

ಜಿ.ಪಂ. ಸದಸ್ಯೆ ಶ್ರೀಲತಾ ಎಸ್‌. ಶೆಟ್ಟಿ, ತಾ.ಪಂ. ಸದಸ್ಯೆ ವೈಲೆಟ್‌ ಬೆರೆಟ್ಟೊ, ಗ್ರಾ.ಪಂ. ಸದಸ್ಯರಾದ ಗಜೇಂದ್ರ ಶೆಟ್ಟಿ, ಸುರೇಶ ಶೆಟ್ಟಿ, ರಮೇಶ ಸುವರ್ಣ,  ಯುವಮೋರ್ಚಾ ಅಧ್ಯಕ್ಷ ಸತೀಶ ಪೂಜಾರಿ, ಬಿಜೆಪಿಯ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next